PM Kisan: 9.8 ಕೋಟಿ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಪಿಎಂ ಕಿಸಾನ್‌ ಯೋಜನೆಯ 19ನೇ ಕಂತು ಈ ದಿನ ಬಿಡುಗಡೆ!!

PM-KISAN: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ. ಇದೀಗ 19ನೇ ಕಂತಿನ ಹಣ ಬಿಡುಗಡೆಯಾದ ನಂತರ, ಈ ಮೊತ್ತವು 3.68 ಲಕ್ಷ ಕೋಟಿ ರೂ.ಗಳಿಗೆ ತಲುಪಲಿದೆ.

Written by - Puttaraj K Alur | Last Updated : Feb 21, 2025, 06:30 PM IST
  • ದೇಶದ 9.8 ಕೋಟಿ ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ
  • ಫೆಬ್ರವರಿ 24ರಂದು ಪಿಎಂ-ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ
  • ರೈತರ ಖಾತೆಗಳಿಗೆ ನೇರವಾಗಿ 22,000 ಕೋಟಿ ರೂ. ಜಮಾ ಮಾಡಲಾಗುತ್ತದೆ
PM Kisan: 9.8 ಕೋಟಿ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಪಿಎಂ ಕಿಸಾನ್‌ ಯೋಜನೆಯ 19ನೇ ಕಂತು ಈ ದಿನ ಬಿಡುಗಡೆ!!   title=
ಪಿಎಂ-ಕಿಸಾನ್ ಯೋಜನೆಯ 19ನೇ ಕಂತಿನ ಹಣ

Pradhan Mantri Kisan Samman Nidhi: ದೇಶದ 9.8 ಕೋಟಿ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ರೈತರಿಗೆ 19ನೇ ಕಂತನ್ನು ಇದೇ ಫೆಬ್ರವರಿ 24ರಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆಂದು ವರದಿಯಾಗಿದೆ. ಇದರಡಿ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಾಗುವುದು, ಇದನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು. ಪಿಎಂ-ಕಿಸಾನ್ ಯೋಜನೆಯಡಿ ಪ್ರತಿಯೊಬ್ಬ ಫಲಾನುಭವಿ ರೈತನಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6,000 ರೂ.ಗಳ ಪ್ರಯೋಜನವನ್ನು ನೀಡಲಾಗುತ್ತದೆ.

ಭಾಗಲ್ಪುರದಿಂದ ₹22,000 ಕೋಟಿ ಬಿಡುಗಡೆ  

ಶುಕ್ರವಾರ ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ʼಫೆಬ್ರವರಿ 24ರಂದು ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆʼ ಎಂದು ಹೇಳಿದರು. ಈ ಮೊತ್ತವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. 18ನೇ ಕಂತಿನಲ್ಲಿ ಫಲಾನುಭವಿಗಳ ಸಂಖ್ಯೆ 9.6 ಕೋಟಿಗೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಫೆಬ್ರವರಿ 2019ರಲ್ಲಿ ಪ್ರಾರಂಭವಾದ PM-KISAN ವಿಶ್ವದ ಅತಿದೊಡ್ಡ DBT (ನೇರ ಲಾಭ ವರ್ಗಾವಣೆ) ಯೋಜನೆಯಾಗಿದೆ. ಈ ಯೋಜನೆಯು ರೈತರಿಗೆ ಬೀಜಗಳು ಮತ್ತು ರಸಗೊಬ್ಬರಗಳ ಖರೀದಿ ವೆಚ್ಚವನ್ನು ಪೂರೈಸಲು ಸಹಾಯ ಮಾಡಿದೆ.

ಇದನ್ನೂ ಓದಿ: ಚಿನ್ನ ಖರೀದಿಸಿ, ಮೇಕಿಂಗ್ ಶುಲ್ಕದಲ್ಲಿ 25% ರಿಯಾಯಿತಿ ಪಡೆಯಿರಿ; ಈ ಕಂಪನಿಯಿಂದ ಅದ್ಭುತ ಕೊಡುಗೆ!!

ಒಂದು ವರ್ಷಕ್ಕೆ ₹6000 ನೀಡಲಾಗುತ್ತದೆ

ರೈತ ಸಮುದಾಯದ ಆದಾಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ಪ್ರತಿಯೊಬ್ಬ ಫಲಾನುಭವಿಯು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6,000 ರೂ.ಗಳ ಪ್ರಯೋಜನವನ್ನು ಪಡೆಯುತ್ತಾರೆ. ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ. ಇದೀಗ 19ನೇ ಕಂತು ಬಿಡುಗಡೆಯಾದ ನಂತರ ಈ ಮೊತ್ತವು 3.68 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಲಿದೆ.

ಆದಾಯ ಹೆಚ್ಚಿಸಲು & ನೈಸರ್ಗಿಕ ಕೃಷಿ ಉತ್ತೇಜಿಸಲು ಬದ್ಧ 

ಉತ್ಪಾದನೆಯನ್ನು ಹೆಚ್ಚಿಸಲು, ಇನ್‌ಪುಟ್ ವೆಚ್ಚವನ್ನು ಕಡಿಮೆ ಮಾಡಲು, ರೈತರ ಉತ್ಪನ್ನಗಳಿಂದ ಅವರ ಆದಾಯವನ್ನು ಹೆಚ್ಚಿಸಲು ಮತ್ತು ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಚೌಹಾಣ್ ಹೇಳಿದ್ದಾರೆ. ಭಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದ ಕುರಿತು ವಿವರ ನೀಡಿದ ಅವರು, ʼಸುಮಾರು 2.5 ಕೋಟಿ ರೈತರು ಭೌತಿಕವಾಗಿ ಮತ್ತು ವಾಸ್ತವಿಕವಾಗಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಬಿಹಾರದ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಕೇಂದ್ರ ಸಚಿವರು ಸಹ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು. ಬರೌನಿಯಲ್ಲಿ ಸ್ಥಾಪಿಸಲಾಗುತ್ತಿರುವ ಡೈರಿ ಸಂಸ್ಕರಣಾ ಘಟಕ ಮತ್ತು ಗೋಕುಲ್ ಮಿಷನ್ ಅಡಿಯಲ್ಲಿ ಶ್ರೇಷ್ಠತಾ ಕೇಂದ್ರವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಇದಲ್ಲದೆ ಅವರು ರಾಜ್ಯದಲ್ಲಿ ಕೆಲವು ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಅಂತಾ ಚೌಹಾಣ್ ತಿಳಿಸಿದರು. 

ಇದನ್ನೂ ಓದಿ: SBI ಅಥವಾ ಪೋಸ್ಟ್ ಆಫೀಸ್; FD ಮೇಲೆ ಯಾರು ಹೆಚ್ಚು ಬಡ್ಡಿ ನೀಡುತ್ತಾರೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News