Karnataka Election 2023: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಸಿಂಧು ಮಾಡಲು ಸಿಎಂ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪದ ಬಗ್ಗೆ ಸುದ್ದಿಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.
Voting from home : ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಒದಗಿಸಿದೆ. ಈ ಸೌಲಭ್ಯವನ್ನು ಯಾರು ಪಡೆಯಬಹುದು ಎಂಬ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಶಿಡ್ಲಘಟ್ಟ ಸ್ವಾಭಿಮಾನಿ ಪರ್ವ ಶುರುವಾಗಿದೆ.. ಶಿಡ್ಲಘಟ್ಟ ನಗರ ಮತ್ತು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಒಂದು ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಬಿಜೆಪಿ ಪಕ್ಷ ತ್ಯಜಿಸಿ ಸ್ಥಳೀಯ ಜೆಡಿಎಸ್ ಅಭ್ಯರ್ಥಿ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ JDS ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ಹೆಣೆದಿದೆ. ಬಿಜೆಪಿ ಪ್ರಮುಖರ ಜೊತೆ ಅಮಿತ್ ಶಾ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ
ಕಾಂಗ್ರೆಸ್ ಜನರಲ್ಲಿ ಆಶೀರ್ವಾದವನ್ನು ಕೇಳುತ್ತದೆ. ಬಿಜೆಪಿ ಜನತೆಗೆ "ಮೋದಿ ಆಶೀರ್ವಾದ"ದ ಬೆದರಿಕೆ ಹಾಕುತ್ತದೆ. ಇದು ಪ್ರಜೆಗಳೇ ಪ್ರಭುಗಳು ಎಂದು ನಂಬಿರುವ ಕಾಂಗ್ರೆಸ್ಸಿಗೂ ಪ್ರಜೆಗಳನ್ನು ಗುಲಾಮರು ಎಂದು ತಿಳಿದ ಬಿಜೆಪಿಗೂ ಇರುವ ವ್ಯತ್ಯಾಸ. ಬಿಜೆಪಿಯವರೇ ಹೇಳಿದಂತೆ ಬಿಜೆಪಿ "ಬ್ಲಾಕ್ಮೇಲ್ ಜನತಾ ಪಾರ್ಟಿ" ಆಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Karnataka Election Photos : ಡಿ.ಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು.
ಶಾಸಕ ರೇಣುಕಾಚಾರ್ಯ ವಿರುದ್ಧ ಹೆಸರು ಹೇಳದೆ ಕಾಂಗ್ರೆಸ್ ಅಭ್ಯರ್ಥಿ ಡಿ. ಜಿ. ಶಾಂತನಗೌಡ ಸಿಡಿ ಬಾಂಬ್ ಸಿಡಿಸಿದ್ದಾರೆ. ಅಲ್ಲದೆ, ರೇಣುಕಾಚಾರ್ಯ ಅವರ ಸಿಡಿ ಇದ್ದು, ಅದನ್ನು ಸ್ಟೇ ವೆಕೆಟ್ ಆದ ಮೇಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
Karnataka Assembly Election 2023: ಮತ ಹಾಕದಿದ್ದರೆ ಮೋದಿಯ ಆಶೀರ್ವಾದ ತಪ್ಪಿಸಿಕೊಳ್ಳುವಿರಿ ಎಂದು ಬೆದರಿಕೆ ಹಾಕಿರುವ ಜೆಪಿ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು. ಇನ್ನು ಅಣ್ಣನ ನಾಮ ಪತ್ರ ಅಂಗೀಕಾರವಾದ ಹಿನ್ನೆಲೆ ಡಿ.ಕೆ. ಸುರೇಶ್ ನಾಮಪತ್ರವನ್ನು ಹಿಂಪಡೆಯುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.